Monday, 22 June 2015
ನಂ ಶಾಲೆಗ್ ಗ್ರೌ��ಡ್ ಬಂತು...
ಇಂದು ಅದೇನು ಹುಮ್ಮಸ್ಸೋ ಏನೋ ಸುಮಾರು ವರ್ಷಗಳಿಂದ ನಂ ಕೊಡಚಿ ಶಾಲೆಗೆ ಆಟದ ಮೈದಾನ ಇಲ್ಲ ಎಂಬ ಕೊರಗು ನೀಗಿಸಲೇ ಬೇಕು ಅಂತ ನಂ ಸಹೋದ್ಯೋಗಿ ಶಿಕ್ಷಕರಾದ ಶ್ರೀ ಗೋಣೆಪ್ಪ ಹಾಗೂ ಶ್ರೀ ಗುರುಲಿಂಗಯ್ಯ ಅವರು ತಯಾರಾದ್ರು. ನನ್ನ ಜೊತೆ ಚರ್ಚಿಸಿ ತಮ್ಮ ಯೋಜನೇನ ಹೇಳಿದ್ರು. ನನಗೂ ಅದು ಸರಿಯೆನಿಸಿತು.ಅಪರಾಹ್ನ ಊಟ ಮುಗಿಸಿ 1:45ಕ್ಕೆ ಎಲ್ಲ ವಿದ್ಯಾರ್ಥಿಗಳ ಜೊತೆ ಸರ್ಕಾರಿ ಜಾಗೆಯಲ್ಲಿದ್ದ ಮುಳ್ಳು ಕಂಟಿ,ಕಲ್ಲು ತೆರವುಗೊಳಿಸಿದೆವು. ಛಲವಿದ್ದರೆ ಎಲ್ಲವೂ ಸಾಧ್ಯ.
INTERNATION YOGA DAY in Our Kodachi School
'ಯೋಗಃ ಚಿತ್ತವೃತ್ತಿ ನಿರೋಧಃ'
On 21June 2015 our school ground is full of students. We all teachers and students were voracious about Yoga. Though Yoga Is part of our curriculum, is not being practiced due to some reasons. But we realised that doing yoga daily helps us to rejuvenate and get rid of stress and adversity. Mr. Goneppa,Mr Gurulingaiah and Mr. Sachinkumar gave explanation and did simple Yogasanas and pupils followed them.
Wednesday, 3 June 2015
2015-2016ನೆಯ ಶಾಲಾ ಪ್ರಾರಂಭೋತ್ಸವ
ಇಂದು ದಿ.30/05/2015ರಂದು ನಮ್ಮ ಕೊಡಚಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಕಾರ್ಯಕ್ರಮವನ್ನು ಆಚರಿಸಲಾಯಿತು.ಬೆಳಗ್ಗೆ 7.45ಕ್ಕೆ ಗ್ರಾಮದ ಪ್ರಮುಖ ಬೀದಿಗಳಲ್ಲಿ
ಶಿಕ್ಷಕರು,ಎಸ್ಡಿಎಂಸಿ ಸದಸ್ಯರು ಸೇರಿ ವಿದ್ಯಾರ್ಥಿಗಳ ಜೊತೆ ಪಥಸಂಚಲನ ನಡೆಸಲಾಯಿತು.
ಬಳಿಕ ಗ್ರಾಮದ ಗಣ್ಯರ, ಎಸ್ಡಿಎಂಸಿ ಸದಸ್ಯರ ಸಮ್ಮುಖದಲ್ಲಿ ಹಾಜರಿದ್ದ ಎಲ್ಲ
ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಲಾಯಿತು.
ಬಳಿಕ ಎಲ್ಲರಿಗೂ ಸಿಹಿ ಹಂಚಲಾಯಿತು.
ಕಾರ್ಯಕ್ರಮವನ್ನು ಆಚರಿಸಲಾಯಿತು.ಬೆಳಗ್ಗೆ 7.45ಕ್ಕೆ ಗ್ರಾಮದ ಪ್ರಮುಖ ಬೀದಿಗಳಲ್ಲಿ
ಶಿಕ್ಷಕರು,ಎಸ್ಡಿಎಂಸಿ ಸದಸ್ಯರು ಸೇರಿ ವಿದ್ಯಾರ್ಥಿಗಳ ಜೊತೆ ಪಥಸಂಚಲನ ನಡೆಸಲಾಯಿತು.
ಬಳಿಕ ಗ್ರಾಮದ ಗಣ್ಯರ, ಎಸ್ಡಿಎಂಸಿ ಸದಸ್ಯರ ಸಮ್ಮುಖದಲ್ಲಿ ಹಾಜರಿದ್ದ ಎಲ್ಲ
ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಲಾಯಿತು.
ಬಳಿಕ ಎಲ್ಲರಿಗೂ ಸಿಹಿ ಹಂಚಲಾಯಿತು.
Monday, 26 January 2015
66ನೆಯ ಗಣತಂತ್ರ ದಿನಾಚರಣೆ
ಇಂದು 66ನೆಯ ಗಣತಂತ್ರ ದಿನವನ್ನು ನಮ್ಮ ಕೊಡಚಿ ಶಾಲೆಯಲ್ಲಿ ಆಚರಿಸಲಾಯಿತು. ಮುಖ್ಯಗುರುಗಳಾದ ಶ್ರೀ ಹರಿಶ್ಚಂದ್ರ ಧ್ವಜಾರೋಹಣ ನೆರವೇರಿಸಿದರು. ಗ್ರಾಮದ ಕನಕದಾಸ ಗ್ರಾಮೀಣ ಯುವ ಬಳಗ ಮಕ್ಕಳಿಗೆ ನೋಟ್ ಪುಸ್ತಕ ಪೆನ್ನು ವಿತರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು
Thursday, 22 January 2015
ಸಿಂಚನ ; ಒಂದು ವಿನೂತನ ತರಬೇತಿ
ಹಿರಿಯ ಪ್ರಾಥಮಿಕ ಶಾಲೆಯ 6 ರಿಂದ 8 ನೆಯ ತರಗತಿಗಳ ಗಣಿತ ಬೋಧಿಸುವ ಶಿಕ್ಷಕರಿಗೆ ಐದು
ದಿನಗಳ ತರಬೇತಿ ಜೇವರ್ಗಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಿಂಚನ ತರಬೇತಿ
ನಡೆಯಿತು. ತರಬೇತಿಯಲ್ಲಿ ಗಣಿತ ವಿಷಯದಲ್ಲಿನ ಪರಿಕಲ್ಪನೆಗಳನ್ನು ವಿಶಿಷ್ಟ ರೀತಿಯಲ್ಲಿ
ತಿಳಿಸಲಾಯಿತು. ಯಾವುದೇ ಬೀಜಾಕ್ಷರದ ಘಾತ ಸೊನ್ನೆ ಇದ್ದಾಗ ಬೆಲೆ ಒಂದು ಹೇಗೆ?
ಎಂಬುದನ್ನು ಬೇರೆ ಬೇರೆ ವಿಧಾನಗಳಿಂದ ತಿಳಿಸಿದರು. ಗಣಿತ ವಿಷಯದಲ್ಲಿ ಪಾಠ ಯೋಜನೆ,
ಅದರ ವ್ಯಾಪ್ತಿ, ತೊಟಡಗಿಸಿಕೊಳ್ಳುವಿಕೆ, ಶೋಧಿಸುವಿಕೆ, ಅಭಿವ್ಯಕ್ತಿಸುವಿಕೆ,
ಅನ್ವಯಿಸುವಿಕೆ,ಮೌಲ್ಯಮಾಪನ ಹೀಗೆ ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕೆಂದು ಸಂಪನ್ಮೂಲ
ವ್ಯಕ್ತಿಗಳು ವಿಶಿಷ್ಟವಾಗಿ ವಿವರಿಸಿದರು.
ಶಿಬಿರಾರ್ಥಿಗಳನ್ನು ತಂಡಗಳಾಗಿ ಮಾಡಿ ಪ್ರತಿ ತಂಡಕ್ಕೂ ಒಂದು ಘಟಕ ನೀಡಿ ಪಾಠ ಮಂಡನೆ
ಮಾಡಲು ತಿಳಿಸಲಾಯಿತು. ಎಲ್ಲ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿದ್ದು
ವಿಶೇಷವಾಗಿತ್ತು.
Wednesday, 21 January 2015
ಶಕ್ತಿ ; ತರಗತಿಯಲ್ಲೊಂದಿಷ್ಟು...
ಅಂದು ತರಗತಿಯಲ್ಲಿ ತೀರಾ ಗದ್ದಲ. ನನ್ನ ಕೈಯಲ್ಲಿದ್ದ ಕೋಲು ಹಾಗೂ ಕ್ಯಾರಿ ಬ್ಯಾಗ್
ನೋಡಿ ವಿದ್ಯಾರ್ಥಿಗಳು ಕ್ಷಣ ಕಾಲ ಭಯಭೀತರಾದರು. ಹೋಂ ವರ್ಕ್ ಮಾಡದವರಿಗೆ ಇದೆ ಹಬ್ಬ
ಅಂತ ಅವರು ತಿಳಿದರೇನೋ? ಒಟ್ಟಿನಲ್ಲಿ ತರಗತಿ ನಿಶ್ಶಬ್ದವಾಯಿತು. ಎಲ್ಲರಿಗೂ ಹಾಯ್
ಹೇಳಿ ನಾನು ತಂದಿದ್ದ ಕೋಲನ್ನು ಒಬ್ಬ ವಿದ್ಯಾರ್ಥಿಗೆ ಮುರಿಯಲು ತಿಳಿಸಿದೆ.ಆತ
ತನ್ನೆಲ್ಲ ಶಕ್ತಿ ಹಾಕಿ ಆ ಕೋಲನ್ನ ಮುರಿದೇಬಿಟ್ಟ,
ಮುಂದೆ ನಾನು ತಂದಿದ್ದ ಕ್ಯಾರಿ ಬ್ಯಾಗ್ ನಿಂದ ಒಂದು ನೀರು ತುಂಬಿದ ವಾಟರ್ ಬಾಟಲ್
ತೆಗೆದು ತರಗತಿ ಎದುರಿನ ಮಣ್ಣಿಗೆ ಎರಚಿದೆ, ಹೀಗೆ ವಿವಿಧ ಶಕ್ತಿಯ ರೂಪಗಳನ್ನು ಸರಳ
ಚಟುವಟಿಕೆಗಳ ಮೂಲಕ ಅನುಗಮನ ವಿಧಾನದಿಂದ ಪರಿಚಯಿಸುತ್ತ ಹೋದೆ. ನನ್ನ
ವಿದ್ಯಾರ್ಥಿಗಳಿಗೆ ನಾನು ಕಲಿಸಿದೆ ಎನ್ನುವುದಕ್ಕಿಂತ ಅವರೇ ಪೂರಕವಾಗಿ ಕಲಿಯುತ್ತಾ
ಹೋದರು. ಪ್ಯಾಯೋಗಿಕ ಬೋಧನೆಯೊಂದಿಗೆ ಪ್ರಾತ್ಯಕ್ಷಿಕೆ ನೀಡಿದರೆ ಸುಳಿದ ಬಾಳೆಹಣ್ಣಂತೆ
ಎಲ್ಲವನ್ನೂ ಚಿಣ್ಣರು ಕಲಿಯಬಲ್ಲರು
ನೋಡಿ ವಿದ್ಯಾರ್ಥಿಗಳು ಕ್ಷಣ ಕಾಲ ಭಯಭೀತರಾದರು. ಹೋಂ ವರ್ಕ್ ಮಾಡದವರಿಗೆ ಇದೆ ಹಬ್ಬ
ಅಂತ ಅವರು ತಿಳಿದರೇನೋ? ಒಟ್ಟಿನಲ್ಲಿ ತರಗತಿ ನಿಶ್ಶಬ್ದವಾಯಿತು. ಎಲ್ಲರಿಗೂ ಹಾಯ್
ಹೇಳಿ ನಾನು ತಂದಿದ್ದ ಕೋಲನ್ನು ಒಬ್ಬ ವಿದ್ಯಾರ್ಥಿಗೆ ಮುರಿಯಲು ತಿಳಿಸಿದೆ.ಆತ
ತನ್ನೆಲ್ಲ ಶಕ್ತಿ ಹಾಕಿ ಆ ಕೋಲನ್ನ ಮುರಿದೇಬಿಟ್ಟ,
ಮುಂದೆ ನಾನು ತಂದಿದ್ದ ಕ್ಯಾರಿ ಬ್ಯಾಗ್ ನಿಂದ ಒಂದು ನೀರು ತುಂಬಿದ ವಾಟರ್ ಬಾಟಲ್
ತೆಗೆದು ತರಗತಿ ಎದುರಿನ ಮಣ್ಣಿಗೆ ಎರಚಿದೆ, ಹೀಗೆ ವಿವಿಧ ಶಕ್ತಿಯ ರೂಪಗಳನ್ನು ಸರಳ
ಚಟುವಟಿಕೆಗಳ ಮೂಲಕ ಅನುಗಮನ ವಿಧಾನದಿಂದ ಪರಿಚಯಿಸುತ್ತ ಹೋದೆ. ನನ್ನ
ವಿದ್ಯಾರ್ಥಿಗಳಿಗೆ ನಾನು ಕಲಿಸಿದೆ ಎನ್ನುವುದಕ್ಕಿಂತ ಅವರೇ ಪೂರಕವಾಗಿ ಕಲಿಯುತ್ತಾ
ಹೋದರು. ಪ್ಯಾಯೋಗಿಕ ಬೋಧನೆಯೊಂದಿಗೆ ಪ್ರಾತ್ಯಕ್ಷಿಕೆ ನೀಡಿದರೆ ಸುಳಿದ ಬಾಳೆಹಣ್ಣಂತೆ
ಎಲ್ಲವನ್ನೂ ಚಿಣ್ಣರು ಕಲಿಯಬಲ್ಲರು
Saturday, 10 January 2015
ನೋಡಿ ತಿಳಿ : ಮಾಡಿ ಕಲಿ
ಅಂದು ಏಳನೆಯ ತರಗತಿಯ ವಿದ್ಯಾರ್ಥಿಗಳಿಗೆ ಬೆಳಕು ಪಾಠದಲ್ಲಿ ಬರುವ ಪೀನ ಮಸೂರದಲ್ಲಿನ ಲಕ್ಷಣಗಳನ್ನು ತಿಳಿಸಿದ ಮೇಲೆ ಕೆಲವು ವಿದ್ಯಾರ್ಥಿಗಳು ತಾವೂ ಸ್ವತಃ ಪ್ರಯೋಗ ಮಾಡಿ ನೋಡುತ್ತೇವೆಂದರು. ಪ್ರಯೋಗ ಸಂಪೂರ್ಣ ಅವರಿಂದಲೇ ನಡೆಯಿತು, ಅವರ ಖುಷಿ ಹೇಳತೀರದು
'ಶಾಲಾ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ' ಸಮಾರಂಭ : 09-01-2015
ಇಂದು ದಿನಾಂಕ 09-01-2015ರಂದು ನಮ್ಮ ಕೊಡಚಿ ಶಾಲೆಯಲ್ಲಿ 'ಶಾಲಾ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ' ಸಮಾರಂಭ ವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭವನ್ನು ಯಾಳವಾರ ಗ್ರಾಮ ಪಂಚಾಯತಿಯ ಅಧ್ಯಕ್ಷರ ಪರವಾಗಿ ಶ್ರೀ ಮಾನಪ್ಪ ಅವರು, ಕಾರ್ಯದರ್ಶಿಗಳಾದ ಶ್ರೀ ಕಾಸಯ್ಯಅವರು ಹಾಗೂ ಇಜೇರಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಅಯ್ಯಣ್ಣ ದೇಸಾಯಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖರಾದ ಶ್ರೀ ಮಾನಪ್ಪ್ ಪೂಜಾರಿ, ಶ್ರೀ ಯಲ್ಲಪ್ಪಗೌಡ ಮಾಲಿ ಪಾಟೀಲ್, ಎಸ್.ಡಿ.ಎಂ.ಸಿ ಅದ್ಯಕ್ಷರಾದ ಶ್ರೀ ಮರೆಪ್ಪ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಉರ್ದು) ಯಾಳವಾರದ ಮುಖ್ಯಗುರುಗಳಾದ ಶ್ರೀ ಅಫ್ಸರ್ ಮಿಯಾ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸೀಗರಥಹಳ್ಳಿಉ ಮುಖ್ಯಗುರುಗಳಾದ ಶ್ರೀ ಇಬ್ರಾಹಿಮ್ ಹಾಗೂ ಗ್ರಾಮದ ವಿವಿಧ ಸಂಘದ ಪದಾಧಿಕಾರಿಗಳು,ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಸಕ್ತರು ಭಾಗವಹಿಸಿದ್ದರು. ಶಿಕ್ಷಕರಾದ ಶ್ರೀ ಮಂಜುನಾಥ ಎಸ್.ಜೆ ಅವರು ಕಾರ್ಯಕ್ರಮ ನಿರೂಪಿಸಿ ಎಲ್ಲರಿಗೆ ಸ್ವಾಗತ ಕೋರಿದರು. ಶಿಕ್ಷಕರಾದ ಶ್ರೀ ಸಚಿನ್ ಕುಮಾರ ಹಿರೇಮಠ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ.ಸಂ.ವ್ಯಕ್ತಿಗಳಾದ ಶ್ರೀ ಅಯ್ಯಣ್ಣ ದೇಸಾಯಿಯವರು ಸಭೆಯ ಗುರಿ ಮತ್ತು ಉದ್ಧೇಶಗಳನ್ನು ವಿವರಿಸಿದರು. ಬಳಿಕ ಎಲ್ಲ ಭಾಗೀದಾರರನ್ನು 4 ಗುಂಪುಗಳನ್ನು ಮಾಡಿ ಶಾಲೆಯಲ್ಲಿರುವ ಸೌಲಭ್ಯಗಳು ಹಾಗೂ ಅವಶ್ಯಕ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಶ್ರೀ ಯಲ್ಲಪ್ಪ ಗೌಡರು ಹಾಗೂ ಶ್ರೀ ಚಾಂದ್ ಪಾಶಾ ಅವರು ಶಾಲೆಗೆ ಕ್ರಮವಾಗಿ 100 ಪ್ಲೇಟ್ಗಳನ್ನು ಹಾಗೂ 100 ಲೋಟಗಳನ್ನು ದಾನವಾಗಿ ನೀಡುವುದಾಗಿ ತಿಳಿಸಿದರು. ಗ್ರಾ.ಪಂ ಕಾರ್ಯದರ್ಶಿಗಳು ಶಾಲೆಗೆ ಒಂದು ಕಂಪ್ಯೂಟರ್ ನೀಡುವುದಾಗಿ ಒಪ್ಪಿಕೊಂಡರು. 

Sunday, 30 November 2014
Subscribe to:
Posts (Atom)


