Monday, 26 January 2015
66ನೆಯ ಗಣತಂತ್ರ ದಿನಾಚರಣೆ
Thursday, 22 January 2015
ಸಿಂಚನ ; ಒಂದು ವಿನೂತನ ತರಬೇತಿ
ಹಿರಿಯ ಪ್ರಾಥಮಿಕ ಶಾಲೆಯ 6 ರಿಂದ 8 ನೆಯ ತರಗತಿಗಳ ಗಣಿತ ಬೋಧಿಸುವ ಶಿಕ್ಷಕರಿಗೆ ಐದು
ದಿನಗಳ ತರಬೇತಿ ಜೇವರ್ಗಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಿಂಚನ ತರಬೇತಿ
ನಡೆಯಿತು. ತರಬೇತಿಯಲ್ಲಿ ಗಣಿತ ವಿಷಯದಲ್ಲಿನ ಪರಿಕಲ್ಪನೆಗಳನ್ನು ವಿಶಿಷ್ಟ ರೀತಿಯಲ್ಲಿ
ತಿಳಿಸಲಾಯಿತು. ಯಾವುದೇ ಬೀಜಾಕ್ಷರದ ಘಾತ ಸೊನ್ನೆ ಇದ್ದಾಗ ಬೆಲೆ ಒಂದು ಹೇಗೆ?
ಎಂಬುದನ್ನು ಬೇರೆ ಬೇರೆ ವಿಧಾನಗಳಿಂದ ತಿಳಿಸಿದರು. ಗಣಿತ ವಿಷಯದಲ್ಲಿ ಪಾಠ ಯೋಜನೆ,
ಅದರ ವ್ಯಾಪ್ತಿ, ತೊಟಡಗಿಸಿಕೊಳ್ಳುವಿಕೆ, ಶೋಧಿಸುವಿಕೆ, ಅಭಿವ್ಯಕ್ತಿಸುವಿಕೆ,
ಅನ್ವಯಿಸುವಿಕೆ,ಮೌಲ್ಯಮಾಪನ ಹೀಗೆ ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕೆಂದು ಸಂಪನ್ಮೂಲ
ವ್ಯಕ್ತಿಗಳು ವಿಶಿಷ್ಟವಾಗಿ ವಿವರಿಸಿದರು.
ಶಿಬಿರಾರ್ಥಿಗಳನ್ನು ತಂಡಗಳಾಗಿ ಮಾಡಿ ಪ್ರತಿ ತಂಡಕ್ಕೂ ಒಂದು ಘಟಕ ನೀಡಿ ಪಾಠ ಮಂಡನೆ
ಮಾಡಲು ತಿಳಿಸಲಾಯಿತು. ಎಲ್ಲ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿದ್ದು
ವಿಶೇಷವಾಗಿತ್ತು.
Wednesday, 21 January 2015
ಶಕ್ತಿ ; ತರಗತಿಯಲ್ಲೊಂದಿಷ್ಟು...
ನೋಡಿ ವಿದ್ಯಾರ್ಥಿಗಳು ಕ್ಷಣ ಕಾಲ ಭಯಭೀತರಾದರು. ಹೋಂ ವರ್ಕ್ ಮಾಡದವರಿಗೆ ಇದೆ ಹಬ್ಬ
ಅಂತ ಅವರು ತಿಳಿದರೇನೋ? ಒಟ್ಟಿನಲ್ಲಿ ತರಗತಿ ನಿಶ್ಶಬ್ದವಾಯಿತು. ಎಲ್ಲರಿಗೂ ಹಾಯ್
ಹೇಳಿ ನಾನು ತಂದಿದ್ದ ಕೋಲನ್ನು ಒಬ್ಬ ವಿದ್ಯಾರ್ಥಿಗೆ ಮುರಿಯಲು ತಿಳಿಸಿದೆ.ಆತ
ತನ್ನೆಲ್ಲ ಶಕ್ತಿ ಹಾಕಿ ಆ ಕೋಲನ್ನ ಮುರಿದೇಬಿಟ್ಟ,
ಮುಂದೆ ನಾನು ತಂದಿದ್ದ ಕ್ಯಾರಿ ಬ್ಯಾಗ್ ನಿಂದ ಒಂದು ನೀರು ತುಂಬಿದ ವಾಟರ್ ಬಾಟಲ್
ತೆಗೆದು ತರಗತಿ ಎದುರಿನ ಮಣ್ಣಿಗೆ ಎರಚಿದೆ, ಹೀಗೆ ವಿವಿಧ ಶಕ್ತಿಯ ರೂಪಗಳನ್ನು ಸರಳ
ಚಟುವಟಿಕೆಗಳ ಮೂಲಕ ಅನುಗಮನ ವಿಧಾನದಿಂದ ಪರಿಚಯಿಸುತ್ತ ಹೋದೆ. ನನ್ನ
ವಿದ್ಯಾರ್ಥಿಗಳಿಗೆ ನಾನು ಕಲಿಸಿದೆ ಎನ್ನುವುದಕ್ಕಿಂತ ಅವರೇ ಪೂರಕವಾಗಿ ಕಲಿಯುತ್ತಾ
ಹೋದರು. ಪ್ಯಾಯೋಗಿಕ ಬೋಧನೆಯೊಂದಿಗೆ ಪ್ರಾತ್ಯಕ್ಷಿಕೆ ನೀಡಿದರೆ ಸುಳಿದ ಬಾಳೆಹಣ್ಣಂತೆ
ಎಲ್ಲವನ್ನೂ ಚಿಣ್ಣರು ಕಲಿಯಬಲ್ಲರು
Saturday, 10 January 2015
ನೋಡಿ ತಿಳಿ : ಮಾಡಿ ಕಲಿ
'ಶಾಲಾ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ' ಸಮಾರಂಭ : 09-01-2015

Sunday, 30 November 2014
Friday, 31 October 2014
ರಾಷ್ಟ್ರೀಯ ಏಕತಾ ದಿವಸ ಆಚರಣೆ
ಇಂದು ದಿ.೩೧.೧೦.೨೦೧೪ ರಂದು ನಮ್ಮ ಕೊಡಚಿ ಶಾಲೆಯಲ್ಲಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ರ ಜನ್ಮದಿನ ಅಂಗವಾಗಿ 'ರಾಷ್ಟ್ರೀಯ ಏಕತಾ ದಿವಸ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸರ್ದಾರ್ ರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರ ಆದರ್ಶಗಳನ್ನು ಹಾಗೂ ಅವರು ಏಕತೆಗಾಗಿ ನಡೆಸಿದ ಹೋರಾಟವನ್ನು ವಿದ್ಯಾರ್ಥಗಳಿಗೆ ತಿಳಿಸಲಾಯಿತು. ನಂತರ ಎಲ್ಲ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು .
ಈ ಆಚರಣೆಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಎಲ್ಲ ಸಹ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Thursday, 23 October 2014
Monday, 13 October 2014
ಯೋಜನಾ ಕಾರ್ಯಗಳು ; ಒಂದು ಪೂರಕ ಕಲಿಕೆ
ವಿಜ್ಞಾನ ಕಲಿಕೆಗೆ ನಿರರ್ಗಳ ಬೋಧನಿಯೊಂದೆ ಸಾಕಾಗುವುದಿಲ್ಲ. ಶಿಕ್ಷಕರ ಜ್ಞಾನ, ಸಮರ್ಪಣೆ ಜೊತೆಗೆ ಯೋಜನಾ ಕಾರ್ಯಗಳು ಮಹತ್ತರ ಪಾತ್ರವಹಿಸುತ್ತವೆ. ಇದರಿಂದ ವಿದ್ಯಾರ್ಥಿಗಳು ಸ್ವತಃ ಕಲಿಯುವುದರಿಂದ ಕಲಿಕೆ ಬಲಗೊಳ್ಳುವುದಲ್ಲದೆ ಉತ್ಸಾಹದಿಂದ ಕಾರ್ಯ ಪ್ರವೃಟಿಟರಾಗುವೌತೆ ಮಾಡುತ್ತದೆ.
ಯೋಜನಾ ಕಾರ್ಯಗಳ ಪ್ರಾಮುಖ್ಯತೆ:
1. ವಿದ್ಯಾರ್ಥಿಗಳ ಗಮನ ಹಾಗೂ ಏಕಾಗ್ರತೆಯನ್ನು ಹಿಡಿದಿಡುತ್ತವೆ.
2. ಸಂಶೋಧನಾ ಪ್ರವೃತ್ತಿಯನ್ನು ಬೆಳೆಸುತ್ತವೆ.
3. ವೈಜ್ಞಾನಿಕ ಚಿಂತನೆ ಬೆಳೆಸುತ್ತವೆ.
4. ಗುಂಪಿನಲ್ಲಿ ಮಾಡುವ ಚಟುವಟಿಕೆಗಳು ಸಹಕಾರ ಗುಣವನ್ನು ಬೆಳೆಸುತ್ತವೆ.
5. ತರಗತಿಯಾಚೆಗೂ ಕಲಿಕೆಯನ್ನು ಪ್ರೇರೇಪಿಸುತ್ತವೆ.
ಶಿಕ್ಷಕರು ಏನೇನು ಮಾಡಬಹುದು?
ಶಿಕ್ಷಕರು ಯೋಜನಾ ಕಾರ್ಯಗಳಲ್ಲಿ ಕೇವಲ ಅನುಕೂಲಿಗಳಾಗಿ ಮಾರ್ಗದರ್ಶನ ನೀಡಬೇಕು. ಆದರೂ ವಿದ್ಯಾರ್ಥಿಗಳಿಗೆ ಹೊಸ ಕಲಿಕೆಗೆ ಅಥವಾ ಸಂಶೋಧನೆಗೆ ಎಡೆ ಮಾಡಿಕೊಡುವಂತ ವಿಷಯಗಳನ್ನು ನೀಡಬೇಕು.
ತೀರಾ ಅಪಾಯಕಾರಿಯಾದ ಅಥವಾ ಕಷ್ಟಕರವಾದ ವಿಷಯಗಳನ್ನು ನೀಡದೆ ಸುಲಭವಾಗಿ ಹಾಗೂ ಸ್ಪಷ್ಟವಾಗಿರುವ ವಿಷಯಗಳನ್ನು ನೀಡಬೇಕು.
ಪ್ರದರ್ಶನ:
ಯೋಜನಾ ಕಾರ್ಯಗಳು ಕೇವಲ ದಾಖಲೆಗಳಾಗಿ ಮಾತ್ರವಾಗದೆ ಅವು ವಿದ್ಯಾರ್ಥಿಗಳ ಮೌಲ್ಯಮಾಪನಕ್ಕೆ ಕನ್ನಡಿಯಾಗಿರಬೇಕು. ಪೋಷಕರಿಗೂ ಪ್ರದರ್ಶನ ಮಾಡುವುದರಿಂದ ಉಳಿದವರಿಗೂ ಸ್ಫೂರ್ತಿಯಾಗುತ್ತದಿ.
ಒಟ್ಟಿನಲ್ಲಿ ಕಲಿಕೆಯ ಜೊತೆಗೆ ಪೂರಕ ಕಾರ್ಯಗಳು ಕಲಿಕೆಯನ್ನು ಉತ್ತೇಜಿಸುತ್ತವೆ.
--ಸಚಿನ್ ಕುಮಾರ




